ಗದಗ ಜಿಲ್ಲೆ ಗಜೇಂದ್ರಗಡದ ಬಣಗಾರ ಕಾಲೋನಿಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಖುಷಿ (15) ಅಪ್ರಾಪ್ತ ಬಾಲಕರ ಕಿರುಕುಳಕ್ಕೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ಕನಸುಗಳ ಜೊತೆ ಬಾಳನ್ನು ಕಟ್ಟಿಕೊಳ್ಳಲು ಬಯಸಿದ್ದ ಈ ಬಾಲಕಿ, ಈ ಘಟನೆಯಿಂದ ಕಣ್ಣೀರಿನ ಕರಾಳ ಅರ್ಥಕತೆ ಬರೆದಿದ್ದಾರೆ.
ಘಟನೆ ವಿವರ:
ಅಪ್ರಾಪ್ತ ಬಾಲಕರ ಕಿರುಕುಳದಿಂದ ಬೇಸತ್ತು, ಮನೆಯಲ್ಲಿಯೇ ಯಾರು ಇಲ್ಲದ ವೇಳೆ ಖುಷಿ ನೇಣು ಹಾಕಿಕೊಂಡಿದ್ದಾಳೆ. ಶಾಲೆಯಲ್ಲಿ ಇಬ್ಬರು ಬಾಲಕರಿಂದ ಮಾನಸಿಕ ಕಿರುಕುಳ ಅನುಭವಿಸುತ್ತಿದ್ದರೆಂದು ಬಾಲಕಿಯ ಕುಟುಂಬ ಆರೋಪಿಸಿದೆ. ಮಗಳ ಈ ದುಃಖದ ಅಂತ್ಯದಿಂದ ಕುಟುಂಬದವರು ಆಕ್ರಂದಿಸುತ್ತಿದ್ದಾರೆ.
ಸಮಾಜದ ಆಕ್ರೋಶ:
ಬಾಲಕಿಯ ಸಾವಿನ ಕುರಿತು ಲವ್ ಜಿಹಾದ್ ಶಂಕೆ ವ್ಯಕ್ತವಾಗಿದ್ದು, ಕೆಲ ಸಮುದಾಯ ವ್ಯಾಪಕ ಪ್ರತಿಭಟನೆಗೆ ಕೈಹಾಕಿದೆ. ವ್ಯಾಪಾರ ವಹಿವಾಟು ಬಂದ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಲಕಿಯ ಸಾವಿನ ಹಿಂದೆ ಲವ್ ಜಿಹಾದ್ ಸಂಚು ಇದೆ ಎಂಬ ಶಂಕೆ ಹೊರ ಹಾಕಲಾಗಿದ್ದು, ಸರಿಯಾದ ತನಿಖೆ ನಡೆಸಬೇಕೆಂದು ತಹಶೀಲ್ದಾರರಿಗೆ ಆಗ್ರಹಿಸಲಾಗಿದೆ.
ಕಾನೂನು ಕ್ರಮ:
ಗಜೇಂದ್ರಗಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಘಟನೆಗೆ ಕಾರಣವಾದ ಬಾಲಕರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಇದರಿಂದ ಬಾಲಕಿಯ ಕುಟುಂಬ ಮತ್ತು ಸ್ಥಳೀಯ ಸಮುದಾಯ ನ್ಯಾಯಕ್ಕಾಗಿ ಕಾಯುತ್ತಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…