ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕೊಲೆ ಬೆದರಿಕೆ ಹಾಕಿದ ಮಧ್ಯಪ್ರದೇಶದ 20 ವರ್ಷದ ಯುವಕನನ್ನು ಎಸ್ಟಿಎಫ್ ಪತ್ತೆ ಹಚ್ಚಿ ಬಂಧಿಸಿದೆ. ಈ ಆರೋಪಿ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಹಸೈ ಮೇವಾಡ ಗ್ರಾಮದ ನಿವಾಸಿ ಸುನಿಲ್ ಗುರ್ಜರ್ ಎಂದು ಗುರುತಿಸಲಾಗಿದೆ.
ಬೆದರಿಕೆ ಮತ್ತು ಪೊಲೀಸರ ಕಾರ್ಯಾಚರಣೆ
ಮಂಗಳವಾರ ಮಧ್ಯಾಹ್ನ, ಸುನಿಲ್ ಗುರ್ಜರ್ ಉತ್ತರ ಪ್ರದೇಶದ ಮುಖ್ಯಮಂತ್ರಿಯ ಅಧಿಕೃತ ನಿವಾಸಕ್ಕೆ ಕರೆ ಮಾಡಿ, ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ ನಂತರ ಕರೆ ಕಡಿತಗೊಳಿಸಿದ್ದನು. ಈ ವಿಚಾರ ತಿಳಿಯುತ್ತಿದ್ದಂತೆ, ಉತ್ತರ ಪ್ರದೇಶ ಪೊಲೀಸರು ತಕ್ಷಣ ಎಚ್ಚರಿಕೆಯಾಗಿದ್ದು, ಎಸ್ಟಿಎಫ್ ಮತ್ತು ಸೈಬರ್ ವಿಭಾಗವು ತನಿಖೆಗೆ ಮುಂದಾಯಿತು. ಸುನಿಲ್ ಪರಾರಿಯಾಗಿದ್ದರೂ, ಟೆಕ್ನಿಕಲ್ ತಂತ್ರಗಳನ್ನು ಬಳಸಿಕೊಂಡು ಆತನ ಮೊಬೈಲ್ನ ಸ್ಥಳವನ್ನು ಪತ್ತೆಹಚ್ಚಿ ಬಂಧಿಸಿದರು.
ತನ್ನನ್ನು ಬಂಧಿಸಿದಾಗ, ಪೊಲೀಸರ ಪ್ರಶ್ನೆಗೆ ಉತ್ತರಿಸುವ ವೇಳೆ, ಸುನಿಲ್ ಗುರ್ಜರ್ ಆತ ದೇಶದ ಅತಿದೊಡ್ಡ ಮತ್ತು ಮೋಸ್ಟ್ ವಾಂಟೆಡ್ ಡಾನ್ ಆಗಲು ಬಯಸಿದ್ದೇನೆಂದು ಹೇಳಿದ್ದಾನೆ. ಈ ಅವ್ಯವಹಾರಿಕ ಉದ್ದೇಶ ಕೇಳಿ ಪೊಲೀಸರೇ ಕೆಲಕಾಲ ಅಚ್ಚರಿಗೊಂಡರು.
ಪೊಲೀಸರ ತನಿಖೆ ಮುಂದುವರಿಕೆ
ಈ ಪ್ರಕರಣದಲ್ಲಿ ಸುನಿಲ್ ಗುರ್ಜರ್ ಯಾವುದೇ ಭಯೋತ್ಪಾದಕ ಸಂಘಟನೆಯೊಂದಿಗೆ ಸಂಪರ್ಕದಲ್ಲಿದಾನೇ? ಅಥವಾ ಈ ಬೆದರಿಕೆಗೆ ಹಿಂದೆಯೇ ಯಾವುದೇ ಆರ್ಥಿಕ ಸಹಾಯ ಪಡೆದಿದ್ದಾನೇ? ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಆತನ ಬ್ಯಾಂಕ್ ಖಾತೆಗಳು, ಮೊಬೈಲ್ ಡೇಟಾ ಮತ್ತು ಇತರ ಮಾಹಿತಿಗಳನ್ನು ಪರಿಶೀಲಿಸಲಾಗುತ್ತಿದೆ.
ಮುಂದಿನ ಹಂತದಲ್ಲಿ, ಆರೋಪಿಯ ಹಿಂದೆ ಇನ್ನೂ ಯಾರಾದರೂ ವ್ಯಕ್ತಿಗಳು ಇದ್ದಾರೆಯೇ ಎಂಬುದರ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…