ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಇಲಾಳ ಗ್ರಾಮದ ಶ್ರೀ ಬೊಮ್ಮಲಿಂಗೆಶ್ವರ ಹಾಗೂ ಲಕ್ಕಮ್ಮದೇವಿಯ ಪೂಜಾ ನಿಮಿತ್ಯವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಯುಗಾದಿ ಪಾಡ್ಯದಂದು ಊರಿನ ಹಿರಿಯರು ಮತ್ತು ಯುವಕರು ಸೇರಿ ಸಂಪ್ರದಾಯದಂತೆ ಹೀರೆಹೊಳಿ (ಕೃಷ್ಣಾ ನದಿ) ಗೆ ದೇವರನ್ನು ತೆಗೆದುಕೊಂಡು ಹೋಗಿ ನದಿ ಸ್ನಾನ ಮಾಡಿಸಲು ಹೋಗಿದ್ದಾಗ ಇಲಾಳ ಗ್ರಾಮದ ಮೂವರು ಯುವಕರು ನೀರು ಪಾಲಾಗಿದ್ದಾರೆ.
ಒಟ್ಟಾರೆಯಾಗಿ 5 ಜನರು ನೀರಿನೊಳಗೆ ಇಳಿದು ಸ್ನಾನ ಮಾಡಲು ತೆರಳಿದ್ದಾರೆ. ಐದು ಜನರ ಪೈಕಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲಿಯ ಸ್ಥಳೀಯರೇ ಈ ಇಬ್ಬರನ್ನು ಕಾಪಾಡಿದ್ದಾರೆ.
ಆದರೆ ದುರದೃಷ್ಟವಶಾತ್ ಇನ್ನೂ ಮೂವರು ಹುಡುಗರು ನೀರು ಪಾಲಾಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ನೀರು ಪಾಲಾದ ಯುವಕರು ಸೋಮಶೇಖರ್ ದೇವರಮನಿ ವಯಸ್ಸು 17 ಡಿಪ್ಲೋಮಾ ಅಭ್ಯಾಸ ಮಾಡುತ್ತಿದ್ದಾನೆ. ಮತ್ತೊಬ್ಬರು ಮಲ್ಲಪ್ಪ ಬಸಪ್ಪ ಬಗಲಿ ವಯಸ್ಸು 15
9 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮತ್ತೋರ್ವ ಪರನಗೌಡ ಮಲ್ಲಪ್ಪ ಬೀಳಗಿ ವಯಸ್ಸು 16, ಈ ಬಾರಿಯ 10 ನೇ ತರಗತಿ 2024-25 ನೇ ಸಾಲಿನ SSLC ಪರೀಕ್ಷೆಯನ್ನು ಬರೆಯುತ್ತಿದ್ದನು ಎಂಬ ಮಾಹಿತಿ ಲಭ್ಯವಾಗಿದೆ.
ಇದರ ಪೈಕಿ ಒಬ್ಬರ ಮೃತ ದೇಹ ಮಾತ್ರ ಪತ್ತೆಯಾಗಿದ್ದು ಇನ್ನೂ ಇಬ್ಬರ ಮೃತ ದೇಹವನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಗ್ರಾಮೀಣ ಪೋಲಿಸ್ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ.
ವರದಿ: ವಿಶ್ವನಾಥ ಭಜಂತ್ರಿ
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…