ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಇಲಾಳ ಗ್ರಾಮದ ಶ್ರೀ ಬೊಮ್ಮಲಿಂಗೆಶ್ವರ ಹಾಗೂ ಲಕ್ಕಮ್ಮದೇವಿಯ ಪೂಜಾ ನಿಮಿತ್ಯವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಯುಗಾದಿ ಪಾಡ್ಯದಂದು ಊರಿನ ಹಿರಿಯರು ಮತ್ತು ಯುವಕರು ಸೇರಿ ಸಂಪ್ರದಾಯದಂತೆ ಹೀರೆಹೊಳಿ (ಕೃಷ್ಣಾ ನದಿ) ಗೆ ದೇವರನ್ನು ತೆಗೆದುಕೊಂಡು ಹೋಗಿ ನದಿ ಸ್ನಾನ ಮಾಡಿಸಲು ಹೋಗಿದ್ದಾಗ ಇಲಾಳ ಗ್ರಾಮದ ಮೂವರು ಯುವಕರು ನೀರು ಪಾಲಾಗಿದ್ದಾರೆ.
ಒಟ್ಟಾರೆಯಾಗಿ 5 ಜನರು ನೀರಿನೊಳಗೆ ಇಳಿದು ಸ್ನಾನ ಮಾಡಲು ತೆರಳಿದ್ದಾರೆ. ಐದು ಜನರ ಪೈಕಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲಿಯ ಸ್ಥಳೀಯರೇ ಈ ಇಬ್ಬರನ್ನು ಕಾಪಾಡಿದ್ದಾರೆ.
ಆದರೆ ದುರದೃಷ್ಟವಶಾತ್ ಇನ್ನೂ ಮೂವರು ಹುಡುಗರು ನೀರು ಪಾಲಾಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ನೀರು ಪಾಲಾದ ಯುವಕರು ಸೋಮಶೇಖರ್ ದೇವರಮನಿ ವಯಸ್ಸು 17 ಡಿಪ್ಲೋಮಾ ಅಭ್ಯಾಸ ಮಾಡುತ್ತಿದ್ದಾನೆ. ಮತ್ತೊಬ್ಬರು ಮಲ್ಲಪ್ಪ ಬಸಪ್ಪ ಬಗಲಿ ವಯಸ್ಸು 15
9 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮತ್ತೋರ್ವ ಪರನಗೌಡ ಮಲ್ಲಪ್ಪ ಬೀಳಗಿ ವಯಸ್ಸು 16, ಈ ಬಾರಿಯ 10 ನೇ ತರಗತಿ 2024-25 ನೇ ಸಾಲಿನ SSLC ಪರೀಕ್ಷೆಯನ್ನು ಬರೆಯುತ್ತಿದ್ದನು ಎಂಬ ಮಾಹಿತಿ ಲಭ್ಯವಾಗಿದೆ.
ಇದರ ಪೈಕಿ ಒಬ್ಬರ ಮೃತ ದೇಹ ಮಾತ್ರ ಪತ್ತೆಯಾಗಿದ್ದು ಇನ್ನೂ ಇಬ್ಬರ ಮೃತ ದೇಹವನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಗ್ರಾಮೀಣ ಪೋಲಿಸ್ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ.
ವರದಿ: ವಿಶ್ವನಾಥ ಭಜಂತ್ರಿ
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…