ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಇಲಾಳ ಗ್ರಾಮದ ಶ್ರೀ ಬೊಮ್ಮಲಿಂಗೆಶ್ವರ ಹಾಗೂ ಲಕ್ಕಮ್ಮದೇವಿಯ ಪೂಜಾ ನಿಮಿತ್ಯವಾಗಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಯುಗಾದಿ ಪಾಡ್ಯದಂದು ಊರಿನ ಹಿರಿಯರು ಮತ್ತು ಯುವಕರು ಸೇರಿ ಸಂಪ್ರದಾಯದಂತೆ ಹೀರೆಹೊಳಿ (ಕೃಷ್ಣಾ ನದಿ) ಗೆ ದೇವರನ್ನು ತೆಗೆದುಕೊಂಡು ಹೋಗಿ ನದಿ ಸ್ನಾನ ಮಾಡಿಸಲು ಹೋಗಿದ್ದಾಗ ಇಲಾಳ ಗ್ರಾಮದ ಮೂವರು ಯುವಕರು ನೀರು ಪಾಲಾಗಿದ್ದಾರೆ.
ಒಟ್ಟಾರೆಯಾಗಿ 5 ಜನರು ನೀರಿನೊಳಗೆ ಇಳಿದು ಸ್ನಾನ ಮಾಡಲು ತೆರಳಿದ್ದಾರೆ. ಐದು ಜನರ ಪೈಕಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲಿಯ ಸ್ಥಳೀಯರೇ ಈ ಇಬ್ಬರನ್ನು ಕಾಪಾಡಿದ್ದಾರೆ.
ಆದರೆ ದುರದೃಷ್ಟವಶಾತ್ ಇನ್ನೂ ಮೂವರು ಹುಡುಗರು ನೀರು ಪಾಲಾಗಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ನೀರು ಪಾಲಾದ ಯುವಕರು ಸೋಮಶೇಖರ್ ದೇವರಮನಿ ವಯಸ್ಸು 17 ಡಿಪ್ಲೋಮಾ ಅಭ್ಯಾಸ ಮಾಡುತ್ತಿದ್ದಾನೆ. ಮತ್ತೊಬ್ಬರು ಮಲ್ಲಪ್ಪ ಬಸಪ್ಪ ಬಗಲಿ ವಯಸ್ಸು 15
9 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮತ್ತೋರ್ವ ಪರನಗೌಡ ಮಲ್ಲಪ್ಪ ಬೀಳಗಿ ವಯಸ್ಸು 16, ಈ ಬಾರಿಯ 10 ನೇ ತರಗತಿ 2024-25 ನೇ ಸಾಲಿನ SSLC ಪರೀಕ್ಷೆಯನ್ನು ಬರೆಯುತ್ತಿದ್ದನು ಎಂಬ ಮಾಹಿತಿ ಲಭ್ಯವಾಗಿದೆ.
ಇದರ ಪೈಕಿ ಒಬ್ಬರ ಮೃತ ದೇಹ ಮಾತ್ರ ಪತ್ತೆಯಾಗಿದ್ದು ಇನ್ನೂ ಇಬ್ಬರ ಮೃತ ದೇಹವನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಗಲಕೋಟೆ ಗ್ರಾಮೀಣ ಪೋಲಿಸ್ ಠಾಣೆಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸಿದ್ದಾರೆ.
ವರದಿ: ವಿಶ್ವನಾಥ ಭಜಂತ್ರಿ
ಬೆಳಗಾವಿ ಜಿಲ್ಲೆಯಲ್ಲಿ ಪ್ರೇಮ ಪ್ರಕರಣವೊಂದು ಹಿಂಸಾತ್ಮಕ ತಿರುವು ಪಡೆದಿದ್ದು, ವಿವಾಹಿತೆಯೊಂದಿಗೆ ಯುವಕ ಓಡಿಹೋದ ಹಿನ್ನೆಲೆ ಆತನ ಮನೆಯ ಮೇಲೆ ಗುಂಪೊಂದು…
ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನಲ್ಲಿ ಪತ್ನಿಯೇ ಪತಿಯ ಕ್ರೌರ್ಯಕ್ಕೆ ಬಲಿಯಾದ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಪಕ್ಕದ ಮನೆಯ ಯುವತಿಯೊಂದಿಗೆ ಹೊಂದಿದ್ದ…
ಮೈಸೂರಿನಲ್ಲಿ ದಂಪತಿ ನಡುವಿನ ಕುಟುಂಬ ಕಲಹ ದಾರುಣ ಅಂತ್ಯ ಕಂಡಿದ್ದು, ಮಕ್ಕಳಾಗಿಲ್ಲ ಎಂಬ ವಿಚಾರಕ್ಕೆ ಉಂಟಾದ ಜಗಳದಲ್ಲಿ ಪತ್ನಿಯೇ ಗಂಡನನ್ನು…
UPSC ಪರೀಕ್ಷೆಯಲ್ಲಿ ಯಶಸ್ಸು ಸಾಧಿಸುವ ಕನಸು ಲಕ್ಷಾಂತರ ಯುವಕರದ್ದಾಗಿದ್ದರೂ, ಅದನ್ನು ನನಸು ಮಾಡುವುದು ಕೆಲವೇ ಮಂದಿಗೆ ಸಾಧ್ಯವಾಗುತ್ತದೆ. ಹಲವು ಮಂದಿ…
ಬಿಹಾರದ ಒಂದು ಸಣ್ಣ ಹಳ್ಳಿಯಿಂದ ಆರಂಭವಾದ ಪ್ರಯಾಣ, ಇಂದು ದೇಶದ ಅತ್ಯುನ್ನತ ನಾಗರಿಕ ಸೇವೆಯಾದ ಐಎಎಸ್ ಹುದ್ದೆ ತಲುಪಿದೆ. ದೃಢ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ. ಸಾರ್ವಜನಿಕರ ರಕ್ಷಣೆಗಾಗಿ ಕರ್ತವ್ಯ ನಿರ್ವಹಿಸಬೇಕಿದ್ದ ಪೊಲೀಸ್ ಅಧಿಕಾರಿಯೇ ಅಪ್ರಾಪ್ತ ಬಾಲಕರ…