ಶಿವಮೊಗ್ಗ ಜಿಲ್ಲೆಯಲ್ಲಿ ಆತ್ಮಹತ್ಯೆ ಘಟನೆ ಸಂಭವಿಸಿದ್ದು, ಜಿಲ್ಲಾ ಪಂಚಾಯತ್ ಸಿಇಓ ಅವರ ನಿವಾಸದಲ್ಲಿ ಅಡುಗೆ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ಎಂಬವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ತೀವ್ರ ಮನೋನೊಂದಿನಿಂದ ವಾರ ಆತ್ಮಹತ್ಯೆಗೆ ಯತ್ನಿಸಿದ್ದ ಸುರೇಶ್ ಅವರನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅನೇಕ ಪ್ರಯತ್ನಗಳ ನಡುವೆಯೂ ವೈದ್ಯಕೀಯ ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.
ಸುರೇಶ್ ಕಳೆದ ಕೆಲವು ತಿಂಗಳಿಂದ ಪತ್ನಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲಸದಿಂದ ಅನಿವಾರ್ಯವಾಗಿ ದೂರವಿದ್ದರು. ಜುಲೈ 22ರಿಂದ 30ರವರೆಗೆ ಒಟ್ಟು ಒಂಬತ್ತು ದಿನ ರಜೆ ಮೇಲೆಿದ್ದರು. ಜುಲೈ 31ರಂದು ಅವರು ಪುನಃ ಕೆಲಸಕ್ಕೆ ಹಾಜರಾಗಿದಾಗ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅವರ ಮೇಲೆ ತರಾಟೆ ತೆಗೆದುಕೊಂಡರು ಎನ್ನಲಾಗಿದೆ. ಅಧಿಕಾರಿಗಳ ಖಾರವಾದ ಮಾತುಗಳಿಂದ ಮನಸ್ಸಿಗೆ ಪೆಟ್ಟು ತಗೊಂಡ ಸುರೇಶ್, ಆ ಕ್ಷಣದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ತೀರ್ಮಾನಿಸಿದ್ದರು.
ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಸಮೀಪವೇ ಈ ದುರ್ಘಟನೆ ಸಂಭವಿಸಿದ್ದು, ತಕ್ಷಣವೇ ಸಾರ್ವಜನಿಕರು ಹಾಗೂ ಸಹೋದ್ಯೋಗಿಗಳ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಈ ಘಟನೆಯು ಇಲಾಖೆಯ ಆಂತರಿಕ ಶಿಸ್ತಿನ ರೀತಿಯನ್ನು ಪ್ರಶ್ನಿಸುವಂತಾಗಿದೆ. ಮಾನವೀಯತೆ ಅಗತ್ಯವಿರುವ ಸನ್ನಿವೇಶಗಳಲ್ಲಿ ಅತಿಯಾದ ಆಡಳಿತಾತ್ಮಕ ಒತ್ತಡವು ಎಂತಹ ದುಃಖಾದಾಯಕ ಫಲಿತಾಂಶಗಳಿಗೆ ಕಾರಣವಾಗಬಹುದು ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ.
ಸುರೇಶ್ ಅವರ ಸಾವಿಗೆ ಸಂಬಂಧಿಸಿದಂತೆ ಈಗ ವಿಚಾರಣೆ ಆರಂಭವಾಗುವ ನಿರೀಕ್ಷೆಯಿದ್ದು, ಸಂಬಂಧಿಸಿದ ಅಧಿಕಾರಿಗಳ ಪಾತ್ರದ ಬಗ್ಗೆ ನಿಖರ ತನಿಖೆಗೆ ಒತ್ತಾಯ ಹೆಚ್ಚುತ್ತಿದೆ.
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…