Latest

ಶಿವಮೊಗ್ಗದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದ ಜಿಲ್ಲಾ ಪಂಚಾಯತ್ ಸಿಇಓ ಮನೆ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಸಾವು”

ಶಿವಮೊಗ್ಗ ಜಿಲ್ಲೆಯಲ್ಲಿ ಆತ್ಮಹತ್ಯೆ ಘಟನೆ ಸಂಭವಿಸಿದ್ದು, ಜಿಲ್ಲಾ ಪಂಚಾಯತ್ ಸಿಇಓ ಅವರ ನಿವಾಸದಲ್ಲಿ ಅಡುಗೆ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ಎಂಬವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ತೀವ್ರ ಮನೋನೊಂದಿನಿಂದ ವಾರ ಆತ್ಮಹತ್ಯೆಗೆ ಯತ್ನಿಸಿದ್ದ ಸುರೇಶ್ ಅವರನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅನೇಕ ಪ್ರಯತ್ನಗಳ ನಡುವೆಯೂ ವೈದ್ಯಕೀಯ ಚಿಕಿತ್ಸೆಗೆ ಸ್ಪಂದಿಸದ ಅವರು ಇಂದು ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ.

ಸುರೇಶ್ ಕಳೆದ ಕೆಲವು ತಿಂಗಳಿಂದ ಪತ್ನಿಯ ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಲಸದಿಂದ ಅನಿವಾರ್ಯವಾಗಿ ದೂರವಿದ್ದರು. ಜುಲೈ 22ರಿಂದ 30ರವರೆಗೆ ಒಟ್ಟು ಒಂಬತ್ತು ದಿನ ರಜೆ ಮೇಲೆಿದ್ದರು. ಜುಲೈ 31ರಂದು ಅವರು ಪುನಃ ಕೆಲಸಕ್ಕೆ ಹಾಜರಾಗಿದಾಗ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಅವರ ಮೇಲೆ ತರಾಟೆ ತೆಗೆದುಕೊಂಡರು ಎನ್ನಲಾಗಿದೆ. ಅಧಿಕಾರಿಗಳ ಖಾರವಾದ ಮಾತುಗಳಿಂದ ಮನಸ್ಸಿಗೆ ಪೆಟ್ಟು ತಗೊಂಡ ಸುರೇಶ್, ಆ ಕ್ಷಣದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ತೀರ್ಮಾನಿಸಿದ್ದರು.

ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಸಮೀಪವೇ ಈ ದುರ್ಘಟನೆ ಸಂಭವಿಸಿದ್ದು, ತಕ್ಷಣವೇ ಸಾರ್ವಜನಿಕರು ಹಾಗೂ ಸಹೋದ್ಯೋಗಿಗಳ ಸಹಾಯದಿಂದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.

ಈ ಘಟನೆಯು ಇಲಾಖೆಯ ಆಂತರಿಕ ಶಿಸ್ತಿನ ರೀತಿಯನ್ನು ಪ್ರಶ್ನಿಸುವಂತಾಗಿದೆ. ಮಾನವೀಯತೆ ಅಗತ್ಯವಿರುವ ಸನ್ನಿವೇಶಗಳಲ್ಲಿ ಅತಿಯಾದ ಆಡಳಿತಾತ್ಮಕ ಒತ್ತಡವು ಎಂತಹ ದುಃಖಾದಾಯಕ ಫಲಿತಾಂಶಗಳಿಗೆ ಕಾರಣವಾಗಬಹುದು ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆಯಾಗಿದೆ.

ಸುರೇಶ್ ಅವರ ಸಾವಿಗೆ ಸಂಬಂಧಿಸಿದಂತೆ ಈಗ ವಿಚಾರಣೆ ಆರಂಭವಾಗುವ ನಿರೀಕ್ಷೆಯಿದ್ದು, ಸಂಬಂಧಿಸಿದ ಅಧಿಕಾರಿಗಳ ಪಾತ್ರದ ಬಗ್ಗೆ ನಿಖರ ತನಿಖೆಗೆ ಒತ್ತಾಯ ಹೆಚ್ಚುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago