ಕೊಟ್ಟೂರು:- ಪಟ್ಟಣದಲ್ಲಿ ಮರಿ ಕೊಟ್ಟೂರೇಶ್ವರ ದೇವಸ್ಥಾನದಿಂದ ಕೂಡ್ಲಿಗಿ ರಸ್ತೆಯ ಡಾ. ಬಿ.ಆರ್.ಅಂಬೇಡ್ಕರ್ ನಗರದವರೆಗೆ ಸರ್ಕಾರದ ಅನುದಾನದಡಿಯಲ್ಲಿ ನೂತನ ರಸ್ತೆ ಮತ್ತು ವಿದ್ಯುತ್ ದೀಪದ ಕಂಬಗಳನ್ನು ನಿರ್ಮಿಸಿದ್ದು,ಕಂಬಗಳಲ್ಲಿರುವ ವಿದ್ಯುತ್ ತಂತಿಗಳನ್ನು ಕಂಬದ ಒಳಗೆ ಹಾಕಿ ಮುಚ್ಚುವುದು ಬಿಟ್ಟು ಹಾಗೆ ವಿದ್ಯುತ್ ತಂತಿಗಳಿಗೆ ಪ್ಯಾಚ್ ಹಾಕಿ ತಂತಿಗಳನ್ನು ಹಾಗೆ ಹೊರಗೆ ಬಿಟ್ಟಿದ್ದಾರೆ.ರಸ್ತೆಯ ಮಧ್ಯದಲ್ಲಿರುವ ಕಂಬಗಳು ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಮತ್ತು ಶಾಲೆಗೆ ಹೋಗುವ ವಿಧ್ಯಾರ್ಥಿಗಳಿಗೆ ಕೈಗೆ ಸಿಗುವ ಹಾಗೆ ಇರುವ ಕಾರಣ ಸಾರ್ವಜನಿಕರಿಗೆ ಈ ವಿದ್ಯುತ್ ತಂತಿಗಳು ತಗುಲಿ ಅನಾಹುತ ಸಂಭವಿಸುವ ಮುನ್ಸೂಚನೆಗಳು ಕಾಣುತ್ತಿದೆ.ಅನಾಹುತ ಸಂಭವಿಸುವ ಮೊದಲು ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ತಂತಿಗಳನ್ನು ವಿದ್ಯುತ್ ಕಂಬದ ಒಳಗಡೆ ಸರಿಪಡಿಸಿ ಅನಾಹುತಗಳನ್ನು ತಡೆಗಟ್ಟಲು ಮುಂದಾಗಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಗಾಲ ಆರಂಭ ಆಗಿರುವುದರಿಂದ ಹಾಗೂ ತಾಲೂಕಿನಲ್ಲಿ ಒಂದು ವಾರದಿಂದ ಬಿಟ್ಟು ಬಿಡದೆ ಮಳೆ ಬರುತ್ತಿರುವುದರಿಂದ ಮಳೆಗಾಲದಲ್ಲಿ ವಿದ್ಯುತ್ ಸ್ಪರ್ಶಿಸಿ ಸಾವುಗಳು ಆಗಿರುವುದು ನಮ್ ಕಣ್ ಮುಂದೆ ಅನೇಕ ಉದಾಹರಣೆಗಳು ಇವೆ ಹಾಗಾಗಿ ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಕ್ರಮ ತೆಗೆದುಕೊಳ್ಳಬೇಕು ಇಲ್ಲವಾದರೆ ಸಂಬಂಧ ಪಟ್ಟ ಕಚೇರಿಯ ಮುಂದೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರು ತಿಳಿಸಿದರು.
ವರದಿ: ಮಣಿಕಂಠ
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…