ಕೊಟ್ಟೂರು:- ಪಟ್ಟಣದಲ್ಲಿ ಮರಿ ಕೊಟ್ಟೂರೇಶ್ವರ ದೇವಸ್ಥಾನದಿಂದ ಕೂಡ್ಲಿಗಿ ರಸ್ತೆಯ ಡಾ. ಬಿ.ಆರ್.ಅಂಬೇಡ್ಕರ್ ನಗರದವರೆಗೆ ಸರ್ಕಾರದ ಅನುದಾನದಡಿಯಲ್ಲಿ ನೂತನ ರಸ್ತೆ ಮತ್ತು ವಿದ್ಯುತ್ ದೀಪದ ಕಂಬಗಳನ್ನು ನಿರ್ಮಿಸಿದ್ದು,ಕಂಬಗಳಲ್ಲಿರುವ ವಿದ್ಯುತ್ ತಂತಿಗಳನ್ನು ಕಂಬದ ಒಳಗೆ ಹಾಕಿ ಮುಚ್ಚುವುದು ಬಿಟ್ಟು ಹಾಗೆ ವಿದ್ಯುತ್ ತಂತಿಗಳಿಗೆ ಪ್ಯಾಚ್ ಹಾಕಿ ತಂತಿಗಳನ್ನು ಹಾಗೆ ಹೊರಗೆ ಬಿಟ್ಟಿದ್ದಾರೆ.ರಸ್ತೆಯ ಮಧ್ಯದಲ್ಲಿರುವ ಕಂಬಗಳು ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಮತ್ತು ಶಾಲೆಗೆ ಹೋಗುವ ವಿಧ್ಯಾರ್ಥಿಗಳಿಗೆ ಕೈಗೆ ಸಿಗುವ ಹಾಗೆ ಇರುವ ಕಾರಣ ಸಾರ್ವಜನಿಕರಿಗೆ ಈ ವಿದ್ಯುತ್ ತಂತಿಗಳು ತಗುಲಿ ಅನಾಹುತ ಸಂಭವಿಸುವ ಮುನ್ಸೂಚನೆಗಳು ಕಾಣುತ್ತಿದೆ.ಅನಾಹುತ ಸಂಭವಿಸುವ ಮೊದಲು ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ತಂತಿಗಳನ್ನು ವಿದ್ಯುತ್ ಕಂಬದ ಒಳಗಡೆ ಸರಿಪಡಿಸಿ ಅನಾಹುತಗಳನ್ನು ತಡೆಗಟ್ಟಲು ಮುಂದಾಗಬೇಕೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಳೆಗಾಲ ಆರಂಭ ಆಗಿರುವುದರಿಂದ ಹಾಗೂ ತಾಲೂಕಿನಲ್ಲಿ ಒಂದು ವಾರದಿಂದ ಬಿಟ್ಟು ಬಿಡದೆ ಮಳೆ ಬರುತ್ತಿರುವುದರಿಂದ ಮಳೆಗಾಲದಲ್ಲಿ ವಿದ್ಯುತ್ ಸ್ಪರ್ಶಿಸಿ ಸಾವುಗಳು ಆಗಿರುವುದು ನಮ್ ಕಣ್ ಮುಂದೆ ಅನೇಕ ಉದಾಹರಣೆಗಳು ಇವೆ ಹಾಗಾಗಿ ಇದಕ್ಕೆ ಸಂಬಂಧ ಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ಕ್ರಮ ತೆಗೆದುಕೊಳ್ಳಬೇಕು ಇಲ್ಲವಾದರೆ ಸಂಬಂಧ ಪಟ್ಟ ಕಚೇರಿಯ ಮುಂದೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಸಾರ್ವಜನಿಕರು ತಿಳಿಸಿದರು.
ವರದಿ: ಮಣಿಕಂಠ
ಬಾಂಗ್ಲಾದೇಶದ ಕಿಶೋರ್ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…
ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…
66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…
ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…
ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…